September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ ಪರೀಕ್ಷೆ, ಆಪ್ತ ಸಮಾಲೋಚನೆ, ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಮೂಲಕ ಕ್ಷಯ ರೋಗ ತಪಾಷಣೆ ನಡೆಸಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪ್ರಸನ್ನ ಆಯುರ್ವೇದ ಕಾಲೇಜಿನ BAMS ವೈದ್ಯ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿನ ಸಿಬ್ಬಂದಿಗಳು ಸಹಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮನಮೋಹನ್ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರು ಮತ್ತು ವೈದ್ಯಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

Related posts

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಉರುವಾಲು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!