22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ ಪರೀಕ್ಷೆ, ಆಪ್ತ ಸಮಾಲೋಚನೆ, ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಮೂಲಕ ಕ್ಷಯ ರೋಗ ತಪಾಷಣೆ ನಡೆಸಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪ್ರಸನ್ನ ಆಯುರ್ವೇದ ಕಾಲೇಜಿನ BAMS ವೈದ್ಯ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿನ ಸಿಬ್ಬಂದಿಗಳು ಸಹಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮನಮೋಹನ್ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರು ಮತ್ತು ವೈದ್ಯಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

Related posts

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya
error: Content is protected !!