25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯ

ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾ ಶ್ರಮದಲ್ಲಿ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ವೈದ್ಯರ ಕೊಠಡಿಯ ಉದ್ಘಾಟನೆ

ಗುಂಡೂರಿ‌ : ಹಿರಿಯ ವೈದ್ಯ ಬಡಕೋಡಿ ಗುತ್ತು ಮನೆತನದ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾಶ್ರಮದ ವೈದ್ಯರ ಕೊಠಡಿಯ ಉದ್ಘಾಟನೆ ಫೆ.9ರಂದು ನಡೆಯಿತು.
ಕರಿಮಣೇಲಿನ ಮೂಂಕಾಡಿಯ ರಾಮಚಂದ್ರ ನಾಯಕ್ ಮತ್ತು ಗೀತಾರವರ 40 ನೇ ವರುಷದ ವೈವಾಹಿಕ ಜೀವನದ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ಸೇವಾಶ್ರಮದಲ್ಲಿ ಧಾರ್ಮಿಕ ಕಾರ್ಯಕ್ರಮ ಕೇಳದ ಪೇಟೆ ವೈದಿಕರಾದ ಶ್ರೀಪತಿ ಭಟ್ ರವರಿಂದ ಗಣಹೋಮ ನಡೆದು ದಂಪತಿಗಳಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ವೇಣೂರಿನ ಹಿರಿಯ ವೈದ್ಯ ಸರಳ ಸಜ್ಜನ ಈ ವೈದ್ಯರ ಮೂಲಕ ವೈದ್ಯರ ಕೊಠಡಿಯನ್ನು ಉದ್ಘಾಟಿಸಲಾಯಿತು ಮತ್ತು ಇವರನ್ನು ಸಂಮ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಗಳೂರಿನ ಉದ್ಯಮಿ ರಮೇಶ್ ನಾಯಕ್ ಹಾಗೂ ಇವರ ಧರ್ಮಪತ್ನಿ ಸುಚಿತ್ರಾ, ಗೋಳಿಯಂಗಡಿಯ ಸತ್ಯರಾಜ್ ಪರಿವಾರ್ ನ ಉದ್ಯಮಿ ಸತ್ಯೇಂದ್ರ ರಾವ್,ಉದ್ಯಮಿ ಭಾಸ್ಕರ ಪೈ, ಸುದತ್ ಜೈನ್,ಆರಂಬೋಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಪ್ರಭಾಕರ ಹುಲಿಮೇರು, ಬಂಧುಮಿತ್ರರು ಉಪಸ್ಥಿತರಿದ್ದರು. ಮನೋರಂಜನೆಗಾಗಿ ಆಗ್ನಿದುರ್ಗೆ ರಸಮಂಜರಿ ತಂಡದಿಂದ ಸಂಗೀತ ಕಾರ್ಯಕ್ರಮ ವಿತ್ತು. ನಿವೃತ್ತ ಸೇನಾನಿ ರಾಮಚಂದ್ರ ನಾಯಕ್ ರವರು ಸ್ವಾಗತಿಸಿದರು ಶ್ರೀಗುರು ಚೈತನ್ಯ ಸೇವಾಶ್ರಮದ ಹೊನ್ನಯ್ಯರವರು ಕಾರ್ಯಕ್ರಮ ನಿರೂಪಿಸಿದರು.

Related posts

ಕಳಿಯ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ತಂಬಾಕು ಹಾಗೂ ಮಾದಕ ದ್ರವ್ಯ ನಿರ್ಮೂಲನ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!