September 6, 2026
Uncategorized

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕತ್ತರಿಗುಡ್ಡೆ ಅನ್ನಾರು ಸಮೀಪ ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆಯೊಂದು .ಫೆ.13ರಂದು ಗುರುವಾರ ಪತ್ತೆಯಾಗಿದೆ.
ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿ
ರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿ,ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿದೆ. ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡಲಾಗಿದ್ದು ಸದ್ಯ ಆನೆ ಅದೇ ಸ್ಥಳದಲ್ಲಿದೆ.
ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya
error: Content is protected !!