![](https://suddiudaya.com/wp-content/uploads/2025/02/bandaru2-1.jpg)
ಬಂದಾರು : ಬಂದಾರು ಗ್ರಾಮದ ಕುರಾಯ ದೇವಸ್ಥಾನ ಬಳಿ ಇರುವ ಜಲ ಜೀವನ್ ನೀರಿನ ಟ್ಯಾಂಕ್ ಪಕ್ಕದ ಗೇರು ತೋಟದಲ್ಲಿ ಫೆ.13 ರಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
![](https://suddiudaya.com/wp-content/uploads/2025/02/bandaru-2.jpg)
![](https://suddiudaya.com/wp-content/uploads/2025/02/bandaru4.jpg)
ವಿಷಯ ತಿಳಿದ ತಕ್ಷಣ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಹಾಗೂ ಸ್ಥಳೀಯ ನಿವಾಸಿಗಳಾದ ಶ್ರೀಧರ ಗೌಡ ಕುಂಬುಡಂಗೆ , ಶ್ರೀತಿಕ್ ಗೌಡ ಕುಂಬುಡಂಗೆ, ರಾಘವ ಗೌಡ ಕುರಾಯ, ಕಾವ್ಯ ಕುರಾಯ , ಮಾಲತಿ ಕುರಾಯ, ಕುಸುಮ ಕುರಾಯ, ಕೃಷ್ಣಪ್ಪ ಖಂಡಿಗ, ಸಚಿನ್ ಶೆಟ್ಟಿ ಬಾಂಗೇರು, ಗಿರೀಶ್ ಗೌಡ ಬಿ ಕೆ.ಕುಂಬುಡಂಗೆ, ಪ್ರಸಾದ್ ಗೌಡ ಅಂಡಿಲ,ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.
![](https://suddiudaya.com/wp-content/uploads/2025/02/bandaru5.jpg)