33.3 C
ಪುತ್ತೂರು, ಬೆಳ್ತಂಗಡಿ
February 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

ವೇಣೂರು: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪ ಮೂಡ ಇದರ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನಾ ಸಮಾರಂಭವು ಫೆ.12 ರಂದು ನಡೆಯಿತು .

ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಇವರು ಈ ಸ್ಟಾಂಪಿಂಗ್ ಉದ್ಘಾಟಿಸಿ ಶುಭ ಹಾರೈಸಿದರು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವೇಣೂರು ಇದರ ಪ್ರಬಂಧಕರಾದ ರಂಜಿತ್ ದೀಪ ಬೆಳಗಿಸಿದರು. ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಜಕ್ರೀಯ ಶುಭ ಹಾರೈಸಿದರು.

ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿ ಇದರ ಸೇವೆಯನ್ನು ಎಲ್ಲ ಗ್ರಾಹಕರು ಪಡೆದುಕೊಂಡು ಸಂಘದಲ್ಲಿ ಉತ್ತಮ ರೀತಿಯಲ್ಲಿ ವ್ಯವಹರಿಸಿ ಸಂಘದ ಶ್ರೇಯೋಭಿವೃದ್ಧಿಗಾಗಿ ಸಹಕರಿಸಬೇಕಾಗಿ ವಿನಂತಿಸಿದರು. ವೇಣೂರು ಮೂರ್ತೆದಾರರ ಅಧ್ಯಕ್ಷ ರಮೇಶ್ ಪೂಜಾರಿ ,ವೆಂಕಟರಮಣ ಕೋ ಆಪರೇಟಿವ್ ವೇಣೂರು ಶಾಖಾ ವ್ಯವಸ್ಥಾಪಕ ಗಾಯನ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾದ ಸುಂದರ ಪೂಜಾರಿ, ರಮೇಶ್ ಅನ್ನಪ್ಪಾಡಿ, ಜಯಶಂಕರ ಕಾನ್ಸ್ ಲೆ, ಅರುಣ್ ಕುಮಾರ್ ಎಮ್, ಆಶಿಶ್ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ಎ ಜಿ ಎಂ ಶಿಲ್ಪಾ ಉಪಸ್ಥಿತರಿದ್ದರು. ನಿರ್ದೇಶಕರಾದ ಅರುಣ್ ಕುಮಾರ್ ಸ್ವಾಗತಿಸಿದರು, ಶಾಖಾ ವ್ಯವಸ್ಥಾಪಕರಾದ ವಿಜಯ. ಕೆ ವಂದಿಸಿದರು.

Related posts

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya
error: Content is protected !!