22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

ವೇಣೂರು: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪ ಮೂಡ ಇದರ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನಾ ಸಮಾರಂಭವು ಫೆ.12 ರಂದು ನಡೆಯಿತು .

ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಇವರು ಈ ಸ್ಟಾಂಪಿಂಗ್ ಉದ್ಘಾಟಿಸಿ ಶುಭ ಹಾರೈಸಿದರು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವೇಣೂರು ಇದರ ಪ್ರಬಂಧಕರಾದ ರಂಜಿತ್ ದೀಪ ಬೆಳಗಿಸಿದರು. ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಜಕ್ರೀಯ ಶುಭ ಹಾರೈಸಿದರು.

ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿ ಇದರ ಸೇವೆಯನ್ನು ಎಲ್ಲ ಗ್ರಾಹಕರು ಪಡೆದುಕೊಂಡು ಸಂಘದಲ್ಲಿ ಉತ್ತಮ ರೀತಿಯಲ್ಲಿ ವ್ಯವಹರಿಸಿ ಸಂಘದ ಶ್ರೇಯೋಭಿವೃದ್ಧಿಗಾಗಿ ಸಹಕರಿಸಬೇಕಾಗಿ ವಿನಂತಿಸಿದರು. ವೇಣೂರು ಮೂರ್ತೆದಾರರ ಅಧ್ಯಕ್ಷ ರಮೇಶ್ ಪೂಜಾರಿ ,ವೆಂಕಟರಮಣ ಕೋ ಆಪರೇಟಿವ್ ವೇಣೂರು ಶಾಖಾ ವ್ಯವಸ್ಥಾಪಕ ಗಾಯನ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾದ ಸುಂದರ ಪೂಜಾರಿ, ರಮೇಶ್ ಅನ್ನಪ್ಪಾಡಿ, ಜಯಶಂಕರ ಕಾನ್ಸ್ ಲೆ, ಅರುಣ್ ಕುಮಾರ್ ಎಮ್, ಆಶಿಶ್ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ಎ ಜಿ ಎಂ ಶಿಲ್ಪಾ ಉಪಸ್ಥಿತರಿದ್ದರು. ನಿರ್ದೇಶಕರಾದ ಅರುಣ್ ಕುಮಾರ್ ಸ್ವಾಗತಿಸಿದರು, ಶಾಖಾ ವ್ಯವಸ್ಥಾಪಕರಾದ ವಿಜಯ. ಕೆ ವಂದಿಸಿದರು.

Related posts

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!