29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ ಪರೀಕ್ಷೆ, ಆಪ್ತ ಸಮಾಲೋಚನೆ, ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಮೂಲಕ ಕ್ಷಯ ರೋಗ ತಪಾಷಣೆ ನಡೆಸಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪ್ರಸನ್ನ ಆಯುರ್ವೇದ ಕಾಲೇಜಿನ BAMS ವೈದ್ಯ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿನ ಸಿಬ್ಬಂದಿಗಳು ಸಹಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮನಮೋಹನ್ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರು ಮತ್ತು ವೈದ್ಯಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

Related posts

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya
error: Content is protected !!