July 23, 2026
ಆರೋಗ್ಯ

ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾ ಶ್ರಮದಲ್ಲಿ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ವೈದ್ಯರ ಕೊಠಡಿಯ ಉದ್ಘಾಟನೆ

ಗುಂಡೂರಿ‌ : ಹಿರಿಯ ವೈದ್ಯ ಬಡಕೋಡಿ ಗುತ್ತು ಮನೆತನದ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾಶ್ರಮದ ವೈದ್ಯರ ಕೊಠಡಿಯ ಉದ್ಘಾಟನೆ ಫೆ.9ರಂದು ನಡೆಯಿತು.
ಕರಿಮಣೇಲಿನ ಮೂಂಕಾಡಿಯ ರಾಮಚಂದ್ರ ನಾಯಕ್ ಮತ್ತು ಗೀತಾರವರ 40 ನೇ ವರುಷದ ವೈವಾಹಿಕ ಜೀವನದ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ಸೇವಾಶ್ರಮದಲ್ಲಿ ಧಾರ್ಮಿಕ ಕಾರ್ಯಕ್ರಮ ಕೇಳದ ಪೇಟೆ ವೈದಿಕರಾದ ಶ್ರೀಪತಿ ಭಟ್ ರವರಿಂದ ಗಣಹೋಮ ನಡೆದು ದಂಪತಿಗಳಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ವೇಣೂರಿನ ಹಿರಿಯ ವೈದ್ಯ ಸರಳ ಸಜ್ಜನ ಈ ವೈದ್ಯರ ಮೂಲಕ ವೈದ್ಯರ ಕೊಠಡಿಯನ್ನು ಉದ್ಘಾಟಿಸಲಾಯಿತು ಮತ್ತು ಇವರನ್ನು ಸಂಮ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಗಳೂರಿನ ಉದ್ಯಮಿ ರಮೇಶ್ ನಾಯಕ್ ಹಾಗೂ ಇವರ ಧರ್ಮಪತ್ನಿ ಸುಚಿತ್ರಾ, ಗೋಳಿಯಂಗಡಿಯ ಸತ್ಯರಾಜ್ ಪರಿವಾರ್ ನ ಉದ್ಯಮಿ ಸತ್ಯೇಂದ್ರ ರಾವ್,ಉದ್ಯಮಿ ಭಾಸ್ಕರ ಪೈ, ಸುದತ್ ಜೈನ್,ಆರಂಬೋಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಪ್ರಭಾಕರ ಹುಲಿಮೇರು, ಬಂಧುಮಿತ್ರರು ಉಪಸ್ಥಿತರಿದ್ದರು. ಮನೋರಂಜನೆಗಾಗಿ ಆಗ್ನಿದುರ್ಗೆ ರಸಮಂಜರಿ ತಂಡದಿಂದ ಸಂಗೀತ ಕಾರ್ಯಕ್ರಮ ವಿತ್ತು. ನಿವೃತ್ತ ಸೇನಾನಿ ರಾಮಚಂದ್ರ ನಾಯಕ್ ರವರು ಸ್ವಾಗತಿಸಿದರು ಶ್ರೀಗುರು ಚೈತನ್ಯ ಸೇವಾಶ್ರಮದ ಹೊನ್ನಯ್ಯರವರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!