23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

ವೇಣೂರು: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪ ಮೂಡ ಇದರ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನಾ ಸಮಾರಂಭವು ಫೆ.12 ರಂದು ನಡೆಯಿತು .

ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಇವರು ಈ ಸ್ಟಾಂಪಿಂಗ್ ಉದ್ಘಾಟಿಸಿ ಶುಭ ಹಾರೈಸಿದರು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವೇಣೂರು ಇದರ ಪ್ರಬಂಧಕರಾದ ರಂಜಿತ್ ದೀಪ ಬೆಳಗಿಸಿದರು. ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಜಕ್ರೀಯ ಶುಭ ಹಾರೈಸಿದರು.

ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿ ಇದರ ಸೇವೆಯನ್ನು ಎಲ್ಲ ಗ್ರಾಹಕರು ಪಡೆದುಕೊಂಡು ಸಂಘದಲ್ಲಿ ಉತ್ತಮ ರೀತಿಯಲ್ಲಿ ವ್ಯವಹರಿಸಿ ಸಂಘದ ಶ್ರೇಯೋಭಿವೃದ್ಧಿಗಾಗಿ ಸಹಕರಿಸಬೇಕಾಗಿ ವಿನಂತಿಸಿದರು. ವೇಣೂರು ಮೂರ್ತೆದಾರರ ಅಧ್ಯಕ್ಷ ರಮೇಶ್ ಪೂಜಾರಿ ,ವೆಂಕಟರಮಣ ಕೋ ಆಪರೇಟಿವ್ ವೇಣೂರು ಶಾಖಾ ವ್ಯವಸ್ಥಾಪಕ ಗಾಯನ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾದ ಸುಂದರ ಪೂಜಾರಿ, ರಮೇಶ್ ಅನ್ನಪ್ಪಾಡಿ, ಜಯಶಂಕರ ಕಾನ್ಸ್ ಲೆ, ಅರುಣ್ ಕುಮಾರ್ ಎಮ್, ಆಶಿಶ್ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ಎ ಜಿ ಎಂ ಶಿಲ್ಪಾ ಉಪಸ್ಥಿತರಿದ್ದರು. ನಿರ್ದೇಶಕರಾದ ಅರುಣ್ ಕುಮಾರ್ ಸ್ವಾಗತಿಸಿದರು, ಶಾಖಾ ವ್ಯವಸ್ಥಾಪಕರಾದ ವಿಜಯ. ಕೆ ವಂದಿಸಿದರು.

Related posts

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya
error: Content is protected !!