20.6 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

ಗುರುವಾಯನಕೆರೆ: ನೀಟ್, ಜೆ ಇ ಇ , ಸಿ ಇ ಟಿ ಸೇರಿ ವಿವಿಧ ಸ್ಪರ್ಧಾತ್ಮಕ ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಪಯುಕ್ತವಾಗುವ ಕಾರ್ಯಾಗಾರ ನಡೆಯಲಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

ಹೆಸರಾಂತ ಶಿಕ್ಷಣ ತಜ್ಞರು ಹಾಗೂ ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಗಂಟೆ 9 ಕ್ಕೆ ದಾಖಲಾತಿ, 9.30 ಕ್ಕೆ ಉಪಾಹಾರ ,10 ಗಂಟೆಗೆ ಉದ್ಘಾಟನೆ ನಡೆದು, ಕಾರ್ಯಾಗಾರ ಸಂಪನ್ನಗೊಳ್ಳಲಿದೆ.

ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕಕ್ಕಿಂಜೆ, ಬಿಸಿರೋಡ್, ವೇಣೂರು ಹಾಗೂ ಉಪ್ಪಿನಂಗಡಿ ಯಿಂದ ಕಾರ್ಯಾಗಾರಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಚಿತ ಬಸ್ ಸಂಚಾರದ ವ್ಯವಸ್ಥೆ ಇದೆ.

ಕಾರ್ಯಾಗಾರದಲ್ಲಿ ಪಾಲ್ಗೊಲು ಆಸಕ್ತರಾದ 10 ನೆಯ ತರಗತಿಯ ವಿದ್ಯಾರ್ಥಿಗಳು ಹಾಗೂ ಹತ್ತನೆಯ ತರಗತಿ ವಿದ್ಯಾರ್ಥಿಗಳ ಹೆತ್ತವರು 9902369252 ಅಥವಾ 9743396842 ಸಂಪರ್ಕಿಸಬಹುದು ಎಂದರು.

Related posts

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya
error: Content is protected !!