September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

ಗುರುವಾಯನಕೆರೆ: ನೀಟ್, ಜೆ ಇ ಇ , ಸಿ ಇ ಟಿ ಸೇರಿ ವಿವಿಧ ಸ್ಪರ್ಧಾತ್ಮಕ ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಪಯುಕ್ತವಾಗುವ ಕಾರ್ಯಾಗಾರ ನಡೆಯಲಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

ಹೆಸರಾಂತ ಶಿಕ್ಷಣ ತಜ್ಞರು ಹಾಗೂ ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಗಂಟೆ 9 ಕ್ಕೆ ದಾಖಲಾತಿ, 9.30 ಕ್ಕೆ ಉಪಾಹಾರ ,10 ಗಂಟೆಗೆ ಉದ್ಘಾಟನೆ ನಡೆದು, ಕಾರ್ಯಾಗಾರ ಸಂಪನ್ನಗೊಳ್ಳಲಿದೆ.

ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕಕ್ಕಿಂಜೆ, ಬಿಸಿರೋಡ್, ವೇಣೂರು ಹಾಗೂ ಉಪ್ಪಿನಂಗಡಿ ಯಿಂದ ಕಾರ್ಯಾಗಾರಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಚಿತ ಬಸ್ ಸಂಚಾರದ ವ್ಯವಸ್ಥೆ ಇದೆ.

ಕಾರ್ಯಾಗಾರದಲ್ಲಿ ಪಾಲ್ಗೊಲು ಆಸಕ್ತರಾದ 10 ನೆಯ ತರಗತಿಯ ವಿದ್ಯಾರ್ಥಿಗಳು ಹಾಗೂ ಹತ್ತನೆಯ ತರಗತಿ ವಿದ್ಯಾರ್ಥಿಗಳ ಹೆತ್ತವರು 9902369252 ಅಥವಾ 9743396842 ಸಂಪರ್ಕಿಸಬಹುದು ಎಂದರು.

Related posts

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ಆನೆದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ಕುಟುಂಬಸ್ಥರಿಗೆ ಸಾಂತ್ವನ – ಪರಿಹಾರ ಧನದ ಚೆಕ್ ಹಸ್ತಾಂತರ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya
error: Content is protected !!