26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ.

ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿ ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ಸಂಪೂತ್ಯವಾಗಿ ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಂಡು ಬಂದಿತ್ತು. ರಾತ್ರಿ ಈ ಆನೆ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಡಾನೆ ಯಾವರೀತಿ ಸಾವನ್ನು ಅಪ್ಪಿದೆ ಎಂಬುದು ಪೋಸ್ಟ್ ಮಾರ್ಟಂ ಬಳಿಕವೇ ತಿಳಿದು ಬರಬೇಕಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದು ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಕಾಡಾನೆ ಜನವಸತಿ ಪ್ರದೇಶದ ಸಮೀಪ ಸಾವನ್ನಪ್ಪಿದ್ದು ಅರಣ್ಯ ಇಲಾಖೆಯವರು ಎಲ್ಲ ರೀತಿಯ ಪರಿಶೀಲನೆಗಳನ್ನು ನಡೆಸಿದ ಬಳಿಕವಷ್ಟೇ ಆನೆಯ ಮೃತದೇಹದ ದಹನ ಕಾರ್ಯ ಮಾಡಲಿದ್ದಾರೆ.

Related posts

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya
error: Content is protected !!