September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ.

ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿ ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ಸಂಪೂತ್ಯವಾಗಿ ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಂಡು ಬಂದಿತ್ತು. ರಾತ್ರಿ ಈ ಆನೆ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಡಾನೆ ಯಾವರೀತಿ ಸಾವನ್ನು ಅಪ್ಪಿದೆ ಎಂಬುದು ಪೋಸ್ಟ್ ಮಾರ್ಟಂ ಬಳಿಕವೇ ತಿಳಿದು ಬರಬೇಕಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದು ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಕಾಡಾನೆ ಜನವಸತಿ ಪ್ರದೇಶದ ಸಮೀಪ ಸಾವನ್ನಪ್ಪಿದ್ದು ಅರಣ್ಯ ಇಲಾಖೆಯವರು ಎಲ್ಲ ರೀತಿಯ ಪರಿಶೀಲನೆಗಳನ್ನು ನಡೆಸಿದ ಬಳಿಕವಷ್ಟೇ ಆನೆಯ ಮೃತದೇಹದ ದಹನ ಕಾರ್ಯ ಮಾಡಲಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya
error: Content is protected !!