25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

ಬಳಂಜ: ನವ ವಿವಾಹಿತ, ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ (35 ವರ್ಷ) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ‌ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ ಪೂಜಾರಿಯವರ ಪುತ್ರ ಕಿರಣ್ ಅವರು ಕಳೆದ 12 ವರ್ಷಗಳಿಂದ ಮೈಸೂರಿನ ಖಾಸಾಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಮೂರೂವರೆ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಮೃದು ಹಾಗೂ ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿರುವ ಇವರು, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಯುವಶಕ್ತಿ ಫ್ರೆಂಡ್ಸ್ ಇದರ ಸದಸ್ಯರಾಗಿದ್ದರು.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಈ ಸಂಬಂಧ ಮೈಸೂರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ತಂದೆ ಕರಿಯ ಪೂಜಾರಿ, ತಾಯಿ ಭಾರತಿ, ಪತ್ನಿ ಅನುಪ್ರಿಯ, ಸಹೋದರ ರಂಜಿತ್ ಪೂಜಾರಿ, ಸಹೋದರಿ ಗುಣವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರದ ಸಮಾರೋಪ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!