July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

ಬಳಂಜ: ನವ ವಿವಾಹಿತ, ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ (35 ವರ್ಷ) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ‌ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ ಪೂಜಾರಿಯವರ ಪುತ್ರ ಕಿರಣ್ ಅವರು ಕಳೆದ 12 ವರ್ಷಗಳಿಂದ ಮೈಸೂರಿನ ಖಾಸಾಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಮೂರೂವರೆ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಮೃದು ಹಾಗೂ ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿರುವ ಇವರು, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಯುವಶಕ್ತಿ ಫ್ರೆಂಡ್ಸ್ ಇದರ ಸದಸ್ಯರಾಗಿದ್ದರು.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಈ ಸಂಬಂಧ ಮೈಸೂರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ತಂದೆ ಕರಿಯ ಪೂಜಾರಿ, ತಾಯಿ ಭಾರತಿ, ಪತ್ನಿ ಅನುಪ್ರಿಯ, ಸಹೋದರ ರಂಜಿತ್ ಪೂಜಾರಿ, ಸಹೋದರಿ ಗುಣವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya
error: Content is protected !!