September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

ಬೆಳ್ತಂಗಡಿ: ದ.ಕ ಜಿಲ್ಲೆಯ ಕಾರಣಿಕ ಕ್ಷೇತ್ರಗಳೊಂದಾಗ ಮುಂಡೂರು ಗ್ರಾಮದ ಮಂಗಳಗಿರಿ ಶ್ರಿನಾಗಕಲ್ಲುರ್ಟಿ ದೇವಸ್ಥಾನದಲ್ಲಿ ಶ್ರೀ ವರಾಹಿ ಮಂತ್ರಮೂರ್ತಿ, ನಾಗಕಲ್ಲುರ್ಟಿ, ಸತ್ಯದೇವತೆ ಹಾಗೂ ಕೊರಗಜ್ಜ, ಶ್ರೀ ಗುಳಿಗ ದೈವಗಳ ಕಾಲಾವಧಿ ನೇಮೋತ್ಸವವು ಆಡಳಿತ ಮೊಕ್ತೇಸರ ರಾಜೀವ ಇವರ ಮಾರ್ಗದರ್ಶನದಲ್ಲಿ ಫೆ. 13 ರಂದು ಊರ ಹಾಗೂ ಪರವೂರುಗಳಿಂದ ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರ ಉಪಸ್ಥಿತಿಯಲ್ಲಿ ವೈಭವ ಪೂರ್ಣವಾಗಿ ನಡೆದು ಭಕ್ತರು ಧನ್ಯತೆಯ ಭಾವನ್ನು ಹೊಂದಿದರು.

ಬೆಳಿಗ್ಗೆ ರುದ್ರಯಾಗ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ ಸಂಜೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ. ಶ್ರೀ ನಾಗಾಂಬಿಕಾ ಭಜನಾ ಮಂಡಳಿ ಇವರಿಂದ ಕುಣಿತ ಭಜನಾ ಕಾರ್ಯಕ್ರಮ, ರಾತ್ರಿ 7ಕ್ಕೆ ನಾಗಂಬಿಕಾ ಅಮ್ಮನವರ ಬಲಿ ಉತ್ಸವ, ದೈವಗಳ ಭಂಡಾರ ಇಳಿಯುವುದು, ದೈವಗಳ ಹಾಗೂ ಶ್ರೀ ನಾಗಾಂಬಿಕಾ ಅಮ್ಮನವರ ಭೇಟಿ, ಸಾರ್ವಜನಿಕ ಅನ್ನಪ್ರಸಾದ, ರಾತ್ರಿ ಶ್ರೀ ವರಾಹಿ ಮಂತ್ರಮೂರ್ತಿ, ನಾಗಕಲ್ಲುರ್ಟಿ, ಸತ್ಯದೇವತೆ ನೇಮೋತ್ಸವ ವಿಜೃಂಭಣೆಯಿಂದ ಜರುಗಿತು. ಬಳಿಕ ರಾತ್ರಿ1 ಗಂಟೆಗೆ ಕೊರಗಜ್ಜ ಕೋಲ, ಮುಂಜಾನೆ ಶ್ರೀ ಗುಳಿಗ ದೈವದ ಕೋಲ ನಡೆಯಿತು. ಕಾಲಾವಧಿ ನೇಮೋತ್ಸವದಲ್ಲಿ ಊರ ಹಾಗೂ ಪರವೂರುಗಳಿಂದ ಭಾರಿ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ಧನ್ಯತೆಯನ್ನ ಪಡೆದರು.

ಆಡಳಿತ ಮೊಕ್ತೇಸರ ರಾಜೀವ, ಶ್ರೀ ನಾಗಂಭಿಕಾ ಭಜನಾ ಮಂಡಳಿ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ಜಯರಾಜ್ ಬಂಗೇರ, ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಜೊತೆ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ, ಮಂಗಳ ಸ್ವ ಸಹಾಯ ತಂಡದ ಸಂತೋಷ್, ಜಯರಾಜ್, ಪ್ರದೀಪ್, ಗುಣಕರ ಕೋಟ್ಯಾನ್, ಸರೋಜ, ಅನೋಜ್, ಪುಷ್ಪಾವತಿ, ಹರೀಶ್ ಹಾಗೂ ಸರ್ವ ಸದಸ್ಯರು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು.

Related posts

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya
error: Content is protected !!