ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

ಉಜಿರೆ : ಕಲಿಕೆ ಚೆನ್ನಾಗಿದ್ದರೆ ಗಳಿಕೆಯೂ ಚೆನ್ನಾಗಿರುತ್ತದೆ. ಕಲಿಕೆಯ ಸಂದರ್ಭದಲ್ಲಿ ಹೆತ್ತವರ ಶ್ರಮ, ಗಳಿಕೆಯ ಸಂದರ್ಭ ನಿಮ್ಮ ಪರಿಶ್ರಮ ನಿಮ್ಮ ಜೀವನವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ರುಡ್‌ ಸೆಟ್‌ ಸಂಸ್ಥೆಯಲ್ಲಿ ಕಲಿತ ತರಬೇತಿಗಳು ನಿಮ್ಮ ಬದುಕಿಗೆ ದಾರಿ ದೀಪವಾಗಲಿ, ವೃತಿಯಲ್ಲಿ ಯಾವುದೇ ಕಾರಣಕ್ಕೂ ಅಡಗಿಸಿಕೊಳ್ಳಬೇಡಿ, ಹೆಚ್ಚು ತೊಡಗಿಸಿಕೊಳ್ಳಿ. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಈ ಸಂಸ್ಥೆಯನ್ನು ಸ್ಥಾಪಿಸುವುದರ ಮೂಲಕ ಆನೇಕ ಯುವಕ-ಯುವತಿಯರು ಸ್ವಂತ ಉದ್ಯೋಗ ಮೂಲಕ ತನ್ನ ಬದುಕನ್ನು ಕಟ್ಟಿಕೊಳ್ಳಲು ಸಹಾಯಕವಾಗಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಡಿ. ಹರ್ಷೇಂದ್ರ ಕುಮಾರ್‌ ಅಭಿಪ್ರಾಯಪಟ್ಟರು.


ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು 13 ದಿನಗಳ ಕಾಲ ನಡೆದ ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು. ಮೌಲ್ಯ ಮತ್ತು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿ ಸ್ವ ಉದ್ಯೋಗಕ್ಕೆ ಬೇಕಾದ ಸಾಲ ಸೌಲಭ್ಯಗಳಿಗೆ ಯೋಜನಾ ವರದಿಯನ್ನು ತಯಾರಿಸಿಕೊಂಡು ಬ್ಯಾಂಕಗಳನ್ನು ಸಂಪರ್ಕ ಮಾಡಿ ಎಂದು ತಿಳಿಸಿದರು.

ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಅಜೇಯ ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟ ನೀಡಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ಸುಮಾರು 64 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ಕುಮಾರಿ ಕೀರ್ತನಾ ಮತ್ತು ಕುಮಾರಿ ಪ್ರತಿಷ್ಟಾ ಪ್ರಾರ್ಥನೆ ಮಾಡಿದರು, ಮಹ್ಮಮದ್ ಫಯಾಜ್‌, ಅಶೋಕ, ಆನಂದ‌, ಕುಮಾರಿ ನಿಸರ್ಗ ತರಬೇತಿಯ ಅನುಭವ ಹಂಚಿಕೊಂಡರು.

Related posts

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಗ್ರಾಮೀಣ ಜನರಿಗೆ ಬ್ಯಾಂಕಿಂಗ್ ಸೇವೆ ತಲುಪಿಸಿದ ಯಶೋಗಾಧೆ

Suddi Udaya
error: Content is protected !!