37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

ಗುರುವಾಯನಕೆರೆ: ನೀಟ್, ಜೆ ಇ ಇ , ಸಿ ಇ ಟಿ ಸೇರಿ ವಿವಿಧ ಸ್ಪರ್ಧಾತ್ಮಕ ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಪಯುಕ್ತವಾಗುವ ಕಾರ್ಯಾಗಾರ ನಡೆಯಲಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

ಹೆಸರಾಂತ ಶಿಕ್ಷಣ ತಜ್ಞರು ಹಾಗೂ ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಗಂಟೆ 9 ಕ್ಕೆ ದಾಖಲಾತಿ, 9.30 ಕ್ಕೆ ಉಪಾಹಾರ ,10 ಗಂಟೆಗೆ ಉದ್ಘಾಟನೆ ನಡೆದು, ಕಾರ್ಯಾಗಾರ ಸಂಪನ್ನಗೊಳ್ಳಲಿದೆ.

ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕಕ್ಕಿಂಜೆ, ಬಿಸಿರೋಡ್, ವೇಣೂರು ಹಾಗೂ ಉಪ್ಪಿನಂಗಡಿ ಯಿಂದ ಕಾರ್ಯಾಗಾರಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಚಿತ ಬಸ್ ಸಂಚಾರದ ವ್ಯವಸ್ಥೆ ಇದೆ.

ಕಾರ್ಯಾಗಾರದಲ್ಲಿ ಪಾಲ್ಗೊಲು ಆಸಕ್ತರಾದ 10 ನೆಯ ತರಗತಿಯ ವಿದ್ಯಾರ್ಥಿಗಳು ಹಾಗೂ ಹತ್ತನೆಯ ತರಗತಿ ವಿದ್ಯಾರ್ಥಿಗಳ ಹೆತ್ತವರು 9902369252 ಅಥವಾ 9743396842 ಸಂಪರ್ಕಿಸಬಹುದು ಎಂದರು.

Related posts

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya
error: Content is protected !!