23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

ಗುರುವಾಯನಕೆರೆ: ನೀಟ್, ಜೆ ಇ ಇ , ಸಿ ಇ ಟಿ ಸೇರಿ ವಿವಿಧ ಸ್ಪರ್ಧಾತ್ಮಕ ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಪಯುಕ್ತವಾಗುವ ಕಾರ್ಯಾಗಾರ ನಡೆಯಲಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

ಹೆಸರಾಂತ ಶಿಕ್ಷಣ ತಜ್ಞರು ಹಾಗೂ ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಗಂಟೆ 9 ಕ್ಕೆ ದಾಖಲಾತಿ, 9.30 ಕ್ಕೆ ಉಪಾಹಾರ ,10 ಗಂಟೆಗೆ ಉದ್ಘಾಟನೆ ನಡೆದು, ಕಾರ್ಯಾಗಾರ ಸಂಪನ್ನಗೊಳ್ಳಲಿದೆ.

ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕಕ್ಕಿಂಜೆ, ಬಿಸಿರೋಡ್, ವೇಣೂರು ಹಾಗೂ ಉಪ್ಪಿನಂಗಡಿ ಯಿಂದ ಕಾರ್ಯಾಗಾರಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಚಿತ ಬಸ್ ಸಂಚಾರದ ವ್ಯವಸ್ಥೆ ಇದೆ.

ಕಾರ್ಯಾಗಾರದಲ್ಲಿ ಪಾಲ್ಗೊಲು ಆಸಕ್ತರಾದ 10 ನೆಯ ತರಗತಿಯ ವಿದ್ಯಾರ್ಥಿಗಳು ಹಾಗೂ ಹತ್ತನೆಯ ತರಗತಿ ವಿದ್ಯಾರ್ಥಿಗಳ ಹೆತ್ತವರು 9902369252 ಅಥವಾ 9743396842 ಸಂಪರ್ಕಿಸಬಹುದು ಎಂದರು.

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya
error: Content is protected !!