24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ.

ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿ ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ಸಂಪೂತ್ಯವಾಗಿ ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಂಡು ಬಂದಿತ್ತು. ರಾತ್ರಿ ಈ ಆನೆ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಡಾನೆ ಯಾವರೀತಿ ಸಾವನ್ನು ಅಪ್ಪಿದೆ ಎಂಬುದು ಪೋಸ್ಟ್ ಮಾರ್ಟಂ ಬಳಿಕವೇ ತಿಳಿದು ಬರಬೇಕಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದು ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಕಾಡಾನೆ ಜನವಸತಿ ಪ್ರದೇಶದ ಸಮೀಪ ಸಾವನ್ನಪ್ಪಿದ್ದು ಅರಣ್ಯ ಇಲಾಖೆಯವರು ಎಲ್ಲ ರೀತಿಯ ಪರಿಶೀಲನೆಗಳನ್ನು ನಡೆಸಿದ ಬಳಿಕವಷ್ಟೇ ಆನೆಯ ಮೃತದೇಹದ ದಹನ ಕಾರ್ಯ ಮಾಡಲಿದ್ದಾರೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya
error: Content is protected !!