37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ.

ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿ ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ಸಂಪೂತ್ಯವಾಗಿ ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಂಡು ಬಂದಿತ್ತು. ರಾತ್ರಿ ಈ ಆನೆ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಡಾನೆ ಯಾವರೀತಿ ಸಾವನ್ನು ಅಪ್ಪಿದೆ ಎಂಬುದು ಪೋಸ್ಟ್ ಮಾರ್ಟಂ ಬಳಿಕವೇ ತಿಳಿದು ಬರಬೇಕಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದು ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಕಾಡಾನೆ ಜನವಸತಿ ಪ್ರದೇಶದ ಸಮೀಪ ಸಾವನ್ನಪ್ಪಿದ್ದು ಅರಣ್ಯ ಇಲಾಖೆಯವರು ಎಲ್ಲ ರೀತಿಯ ಪರಿಶೀಲನೆಗಳನ್ನು ನಡೆಸಿದ ಬಳಿಕವಷ್ಟೇ ಆನೆಯ ಮೃತದೇಹದ ದಹನ ಕಾರ್ಯ ಮಾಡಲಿದ್ದಾರೆ.

Related posts

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya
error: Content is protected !!