23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ.

ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿ ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ಸಂಪೂತ್ಯವಾಗಿ ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಂಡು ಬಂದಿತ್ತು. ರಾತ್ರಿ ಈ ಆನೆ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಡಾನೆ ಯಾವರೀತಿ ಸಾವನ್ನು ಅಪ್ಪಿದೆ ಎಂಬುದು ಪೋಸ್ಟ್ ಮಾರ್ಟಂ ಬಳಿಕವೇ ತಿಳಿದು ಬರಬೇಕಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದು ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಕಾಡಾನೆ ಜನವಸತಿ ಪ್ರದೇಶದ ಸಮೀಪ ಸಾವನ್ನಪ್ಪಿದ್ದು ಅರಣ್ಯ ಇಲಾಖೆಯವರು ಎಲ್ಲ ರೀತಿಯ ಪರಿಶೀಲನೆಗಳನ್ನು ನಡೆಸಿದ ಬಳಿಕವಷ್ಟೇ ಆನೆಯ ಮೃತದೇಹದ ದಹನ ಕಾರ್ಯ ಮಾಡಲಿದ್ದಾರೆ.

Related posts

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya
error: Content is protected !!