July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಹಿನ್ನಲೆ ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದರು.

25 ರಿಂದ 30 ವರ್ಷದ ಹೆಣ್ಣು ಆನೆ ಆಗಿದ್ದು , ಕಳೆದ ಎರಡು ತಿಂಗಳಿಂದ ಸರಿಯಾದ ಆಹಾರ ಸೇವಿಸುತ್ತಿರಲ್ಲಿಲ್ಲ ಎನ್ನಲಾಗಿದೆ ‌. ಆನೆಯ ದೇಹದ ಹೊರಗಡೆ ಯಾವುದೇ ಗಾಯವಿಲ್ಲ ದೇಹದ ಒಳಗೆ ಬಹು ಅಂಗಾಂಗ ವೈಫಲ್ಯ ಇರುವುದು ಕಂಡು ಬಂದಿದೆ ಎಂದು ಡಿಎಫ್ಓ ಮಾಹಿತಿ ನೀಡಿದರು.

ಭದ್ರತಾ ದೃಷ್ಟಿಯಿಂದ ಆನೆಯ ಎರಡು ದಂತವನ್ನು ತೆಗೆದು ಬೆಳ್ತಂಗಡಿ ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ‌.

ಬೆಳ್ತಂಗಡಿ ಡಾ. ರವಿ ಕುಮಾರ್.ಎಮ್, ಚಾರ್ಮಾಡಿ ಡಾ.ಯತೀಶ್ ಕುಮಾರ್.ಎಮ್.ಎಸ್ ಮರಣೋತ್ತರ ಪರೀಕ್ಷೆ ನಡೆಸಿದರು.

ಡಿಎಫ್ಓ ಅಂಥೋಣಿ ಮರಿಯಪ್ಪ, ಎಸಿಎಫ್ ಕ್ಷೀಫರ್ಡ್ ಲೋಬೋ, ಆರ್.ಎಫ್.ಓ ಟಿ.ಎನ್.ತ್ಯಾಗರಾಜ್, ಚಾರ್ಮಾಡಿ ಡಿ.ವೈ.ಆರ್.ಎಫ್‌.ಓ ನಾಗೇಶ್.ಪಿ.ಜಿ. ಬೆಳ್ತಂಗಡಿ ಡಿ.ವೈಆರ್.ಎಫ್.ಓ ರವಿಚಂದ್ರ.ಕೆ, ಗಸ್ತು ಅರಣ್ಯ ಪಾಲಕ ರವಿ,ಪರಶುರಾಮ, ಅರಣ್ಯ ವೀಕ್ಷಕರಾದ ಗೋಪಾಲ, ಕಿಟ್ಟಣ್ಣ, ಮನೋಹರ್,ಅನಿಲ್. , ಸ್ಥಳೀಯರಾದ ಸ್ನೇಕ್ ಅನಿಲ್, ಮುಂಡಾಜೆ ಸಚಿನ್ ಭೀಡೆ,ಜನಾರ್ದನ, ಕೃಷ್ಣಪ್ಪ ಭಾಗಿಯಾಗಿದ್ದರು‌.

ಆನೆಯನ್ನು ಸ್ಥಳದಲ್ಲಿಯೇ ಹಿಟಾಚಿ ಮೂಲಕ ದಫನ‌ ಮಾಡಲಾಯಿತು.

Related posts

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!