27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

ಪುಂಜಾಲಕಟ್ಟೆ: ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಸ್ತುತ ಬೆಂಗಳೂರಿನ ಯಸ್ಕಾವ ಕಂಪೆನಿಯಲ್ಲಿ ಉನ್ನತ ಹುದ್ದೆಯಲ್ಲಿರುವ ರಮೇಶ್ ಶೆಟ್ಟಿ ಕುಮಂಗಿಲ ಇವರು ತಮ್ಮ ಕಂಪೆನಿಯ ಸಿಎಸ್ಆರ್ ನಿಧಿ ಮೂಲಕ ಕೊಡುಗೆಯಾಗಿ ನೀಡಿದ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ ಭಾಗವಹಿಸಿ ಶುಭ ಹಾರೈಸಿದರು. ಯಸ್ಕಾವ ಕಂಪೆನಿಯವರು ನೀಡಿದ ಸ್ಮಾರ್ಟ್ ಕ್ಲಾಸ್, ಡೆಸ್ಕ್‌ಟಾಪ್‌, ಇನ್ವರ್ಟರ್, ಪ್ರಾಜೆಕ್ಟರ್, ಪ್ರಿಂಟರ್, ಮತ್ತು ಕುರ್ಚಿಗಳು ಮುಂತಾದ ಸುಮಾರು ನಾಲ್ಕು ಲಕ್ಷ ಮೌಲ್ಯದ ವಸ್ತುಗಳನ್ನು ಕಂಪೆನಿಯ ಹೆಚ್ ಆರ್ ಮೆನೇಜರ್ ರಾಜೇಶ್ ಇವರು ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಜಯಶೀಲ ಇವರಿಗೆ ಹಸ್ತಾಂತರಿಸಿದರು.

ಯಸ್ಕಾವ ಕಂಪೆನಿಯ ಪ್ರಮುಖರಾದ ಮಹೇಶ್ ಕುಮಾರ್, ಪುನೀತ್, ಶ್ರೀಕಾಂತ್ ಉಪಸ್ಥಿತರಿದ್ದರು. ಶಾಲಾ ಹಿರಿಯ ವಿದ್ಯಾರ್ಥಿ ಮತ್ತು ಯಸ್ಕಾವ ಕಂಪೆನಿಯ ಪ್ರೊಡಕ್ಷನ್ ಮೆನೇಜರ್ ರಮೇಶ್ ಶೆಟ್ಟಿಯವರು ತಮ್ಮ ಶಾಲಾ ದಿನಗಳನ್ನು ಮೆಲುಕು ಹಾಕಿ ,ಶಾಲೆಯ ಅಭಿವೃದ್ಧಿಗೆ ಇನ್ನಷ್ಟು ಸಹಕಾರದ ಭರವಸೆ ನೀಡಿದರು. ಪಿಲಾತ್ತಬೆಟ್ಟು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ರತ್ನಾಕರ್ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಪ್ರಮುಖರಾದ ಚಂದ್ರಶೇಖರ್ ಶೆಟ್ಟಿ, ಶುಭಕರ್ ಶೆಟ್ಟಿ, ಹರೀಶ್ ಪೂಜಾರಿ ಕಜೆ , ಹರೀಶ್ ಶೆಟ್ಟಿ ಕುಮೇರು ಮತ್ತು ಶಾಲಾ ಎಸ್ಡಿಎಂಸಿ ಸದಸ್ಯರು ಭಾಗವಹಿಸಿದ್ದರು.

Related posts

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya
error: Content is protected !!