September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

ಪುತ್ತಿಲ: ಪುತ್ತಿಲ ಗ್ರಾಮದ ನಡುಕೇಯ೯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ. 9 ಆದಿತ್ಯವಾರದಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್‌ನ ಸಭೆ ಟ್ರಸ್ಟ್ ಅಧ್ಯಕ್ಷ ಆನಲೆ ಶೇಖರ ಪೂಜಾರಿರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.


ಇದೇ ಸಂದರ್ಭದಲ್ಲಿ ಕುಟುಂಬದ ಹಿರಿಯರೂ, ಯಜಮಾನರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನೂ, ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್‌ರವರ ಬಾಬ್ತು ಅವರ ಹೆತ್ತವರಾದ ಕೆ.ರಾಮಣ್ಣ ಪೂಜಾರಿ ಕೊಯ್ಯೂರು ಮತ್ತು ಶಾಂತಿ ದಂಪತಿ ಹಾಗೂ ಕ್ರೀಡಾಪಟು ಲಿಶನ್ ಪುರಿಯ, ಸುಪ್ರೀತ್ ನಡುಕೇರ ಇವರನ್ನು ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು. ದೈವಗಳಿಗೆ ಪರಿಚಾಲಕರಾಗಿ ಜಯಾನಂದ ಆನ ಸೇವೆಗೈದರು. ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ, ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು.
ವರದಿ:ಕೆ. ರಾಮಣ್ಣ ಪೂಜಾರಿ

Related posts

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya
error: Content is protected !!