29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು, ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕ ಹರೀಶ್ ಪೂಂಜರಿಗೆ ಫೆ.14ರಂದು ಸಲ್ಲಿಸಿ ದರು.

ಈ ಹಿಂದೆ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಅದರಂತೆ ಮುಷ್ಕರವನ್ನು ಹಿಂಪಡೆಯಲಾಗಿತ್ತು. ನಂತರ ಸರಕಾರ ನೌಕರರ ಬೇಡಿಕೆಗಳ ಬಗ್ಗೆ ಯಾವುದೇ ತೃಪ್ತಿದಾಯಕ ಕ್ರಮಗಳನ್ನು ಕೈಗೊಂಡಿಲ್ಲ, ಬೇಡಿಕೆಗಳನ್ನು ಈಡೇರಿಸಿಲ್ಲ, ಬದಲಾಗಿ ಮುಷ್ಕರ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ನೀಡಿದೆ. ಇದರಿಂದಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ ಕರೆಯಂತೆ ಸರಕಾರದ ಮುಂದೆ 23 ಬೇಡಿಕೆಗಳನ್ನು ಮುಂದುವರಿಸಿ, ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ನಡೆಸುತ್ತಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್, ಪರಮೇಶ್ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!