22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು, ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕ ಹರೀಶ್ ಪೂಂಜರಿಗೆ ಫೆ.14ರಂದು ಸಲ್ಲಿಸಿ ದರು.

ಈ ಹಿಂದೆ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಅದರಂತೆ ಮುಷ್ಕರವನ್ನು ಹಿಂಪಡೆಯಲಾಗಿತ್ತು. ನಂತರ ಸರಕಾರ ನೌಕರರ ಬೇಡಿಕೆಗಳ ಬಗ್ಗೆ ಯಾವುದೇ ತೃಪ್ತಿದಾಯಕ ಕ್ರಮಗಳನ್ನು ಕೈಗೊಂಡಿಲ್ಲ, ಬೇಡಿಕೆಗಳನ್ನು ಈಡೇರಿಸಿಲ್ಲ, ಬದಲಾಗಿ ಮುಷ್ಕರ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ನೀಡಿದೆ. ಇದರಿಂದಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ ಕರೆಯಂತೆ ಸರಕಾರದ ಮುಂದೆ 23 ಬೇಡಿಕೆಗಳನ್ನು ಮುಂದುವರಿಸಿ, ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ನಡೆಸುತ್ತಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್, ಪರಮೇಶ್ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya
error: Content is protected !!