September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು, ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕ ಹರೀಶ್ ಪೂಂಜರಿಗೆ ಫೆ.14ರಂದು ಸಲ್ಲಿಸಿ ದರು.

ಈ ಹಿಂದೆ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಅದರಂತೆ ಮುಷ್ಕರವನ್ನು ಹಿಂಪಡೆಯಲಾಗಿತ್ತು. ನಂತರ ಸರಕಾರ ನೌಕರರ ಬೇಡಿಕೆಗಳ ಬಗ್ಗೆ ಯಾವುದೇ ತೃಪ್ತಿದಾಯಕ ಕ್ರಮಗಳನ್ನು ಕೈಗೊಂಡಿಲ್ಲ, ಬೇಡಿಕೆಗಳನ್ನು ಈಡೇರಿಸಿಲ್ಲ, ಬದಲಾಗಿ ಮುಷ್ಕರ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ನೀಡಿದೆ. ಇದರಿಂದಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ ಕರೆಯಂತೆ ಸರಕಾರದ ಮುಂದೆ 23 ಬೇಡಿಕೆಗಳನ್ನು ಮುಂದುವರಿಸಿ, ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ನಡೆಸುತ್ತಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್, ಪರಮೇಶ್ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya
error: Content is protected !!