32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

ಬೆಳ್ತಂಗಡಿ: ದ.ಕ ಜಿಲ್ಲೆಯ ಕಾರಣಿಕ ಕ್ಷೇತ್ರಗಳೊಂದಾಗ ಮುಂಡೂರು ಗ್ರಾಮದ ಮಂಗಳಗಿರಿ ಶ್ರಿನಾಗಕಲ್ಲುರ್ಟಿ ದೇವಸ್ಥಾನದಲ್ಲಿ ಶ್ರೀ ವರಾಹಿ ಮಂತ್ರಮೂರ್ತಿ, ನಾಗಕಲ್ಲುರ್ಟಿ, ಸತ್ಯದೇವತೆ ಹಾಗೂ ಕೊರಗಜ್ಜ, ಶ್ರೀ ಗುಳಿಗ ದೈವಗಳ ಕಾಲಾವಧಿ ನೇಮೋತ್ಸವವು ಆಡಳಿತ ಮೊಕ್ತೇಸರ ರಾಜೀವ ಇವರ ಮಾರ್ಗದರ್ಶನದಲ್ಲಿ ಫೆ. 13 ರಂದು ಊರ ಹಾಗೂ ಪರವೂರುಗಳಿಂದ ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರ ಉಪಸ್ಥಿತಿಯಲ್ಲಿ ವೈಭವ ಪೂರ್ಣವಾಗಿ ನಡೆದು ಭಕ್ತರು ಧನ್ಯತೆಯ ಭಾವನ್ನು ಹೊಂದಿದರು.

ಬೆಳಿಗ್ಗೆ ರುದ್ರಯಾಗ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ ಸಂಜೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ. ಶ್ರೀ ನಾಗಾಂಬಿಕಾ ಭಜನಾ ಮಂಡಳಿ ಇವರಿಂದ ಕುಣಿತ ಭಜನಾ ಕಾರ್ಯಕ್ರಮ, ರಾತ್ರಿ 7ಕ್ಕೆ ನಾಗಂಬಿಕಾ ಅಮ್ಮನವರ ಬಲಿ ಉತ್ಸವ, ದೈವಗಳ ಭಂಡಾರ ಇಳಿಯುವುದು, ದೈವಗಳ ಹಾಗೂ ಶ್ರೀ ನಾಗಾಂಬಿಕಾ ಅಮ್ಮನವರ ಭೇಟಿ, ಸಾರ್ವಜನಿಕ ಅನ್ನಪ್ರಸಾದ, ರಾತ್ರಿ ಶ್ರೀ ವರಾಹಿ ಮಂತ್ರಮೂರ್ತಿ, ನಾಗಕಲ್ಲುರ್ಟಿ, ಸತ್ಯದೇವತೆ ನೇಮೋತ್ಸವ ವಿಜೃಂಭಣೆಯಿಂದ ಜರುಗಿತು. ಬಳಿಕ ರಾತ್ರಿ1 ಗಂಟೆಗೆ ಕೊರಗಜ್ಜ ಕೋಲ, ಮುಂಜಾನೆ ಶ್ರೀ ಗುಳಿಗ ದೈವದ ಕೋಲ ನಡೆಯಿತು. ಕಾಲಾವಧಿ ನೇಮೋತ್ಸವದಲ್ಲಿ ಊರ ಹಾಗೂ ಪರವೂರುಗಳಿಂದ ಭಾರಿ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ಧನ್ಯತೆಯನ್ನ ಪಡೆದರು.

ಆಡಳಿತ ಮೊಕ್ತೇಸರ ರಾಜೀವ, ಶ್ರೀ ನಾಗಂಭಿಕಾ ಭಜನಾ ಮಂಡಳಿ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ಜಯರಾಜ್ ಬಂಗೇರ, ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಜೊತೆ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ, ಮಂಗಳ ಸ್ವ ಸಹಾಯ ತಂಡದ ಸಂತೋಷ್, ಜಯರಾಜ್, ಪ್ರದೀಪ್, ಗುಣಕರ ಕೋಟ್ಯಾನ್, ಸರೋಜ, ಅನೋಜ್, ಪುಷ್ಪಾವತಿ, ಹರೀಶ್ ಹಾಗೂ ಸರ್ವ ಸದಸ್ಯರು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು.

Related posts

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya
error: Content is protected !!