ಗುರುವಾಯನಕೆರೆ: ನೀಟ್, ಜೆ ಇ ಇ , ಸಿ ಇ ಟಿ ಸೇರಿ ವಿವಿಧ ಸ್ಪರ್ಧಾತ್ಮಕ ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಪಯುಕ್ತವಾಗುವ ಕಾರ್ಯಾಗಾರ ನಡೆಯಲಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.
ಹೆಸರಾಂತ ಶಿಕ್ಷಣ ತಜ್ಞರು ಹಾಗೂ ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಗಂಟೆ 9 ಕ್ಕೆ ದಾಖಲಾತಿ, 9.30 ಕ್ಕೆ ಉಪಾಹಾರ ,10 ಗಂಟೆಗೆ ಉದ್ಘಾಟನೆ ನಡೆದು, ಕಾರ್ಯಾಗಾರ ಸಂಪನ್ನಗೊಳ್ಳಲಿದೆ.
ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕಕ್ಕಿಂಜೆ, ಬಿಸಿರೋಡ್, ವೇಣೂರು ಹಾಗೂ ಉಪ್ಪಿನಂಗಡಿ ಯಿಂದ ಕಾರ್ಯಾಗಾರಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಚಿತ ಬಸ್ ಸಂಚಾರದ ವ್ಯವಸ್ಥೆ ಇದೆ.
ಕಾರ್ಯಾಗಾರದಲ್ಲಿ ಪಾಲ್ಗೊಲು ಆಸಕ್ತರಾದ 10 ನೆಯ ತರಗತಿಯ ವಿದ್ಯಾರ್ಥಿಗಳು ಹಾಗೂ ಹತ್ತನೆಯ ತರಗತಿ ವಿದ್ಯಾರ್ಥಿಗಳ ಹೆತ್ತವರು 9902369252 ಅಥವಾ 9743396842 ಸಂಪರ್ಕಿಸಬಹುದು ಎಂದರು.