23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

ಗುರುವಾಯನಕೆರೆ: ನೀಟ್, ಜೆ ಇ ಇ , ಸಿ ಇ ಟಿ ಸೇರಿ ವಿವಿಧ ಸ್ಪರ್ಧಾತ್ಮಕ ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಪಯುಕ್ತವಾಗುವ ಕಾರ್ಯಾಗಾರ ನಡೆಯಲಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

ಹೆಸರಾಂತ ಶಿಕ್ಷಣ ತಜ್ಞರು ಹಾಗೂ ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಗಂಟೆ 9 ಕ್ಕೆ ದಾಖಲಾತಿ, 9.30 ಕ್ಕೆ ಉಪಾಹಾರ ,10 ಗಂಟೆಗೆ ಉದ್ಘಾಟನೆ ನಡೆದು, ಕಾರ್ಯಾಗಾರ ಸಂಪನ್ನಗೊಳ್ಳಲಿದೆ.

ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕಕ್ಕಿಂಜೆ, ಬಿಸಿರೋಡ್, ವೇಣೂರು ಹಾಗೂ ಉಪ್ಪಿನಂಗಡಿ ಯಿಂದ ಕಾರ್ಯಾಗಾರಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಚಿತ ಬಸ್ ಸಂಚಾರದ ವ್ಯವಸ್ಥೆ ಇದೆ.

ಕಾರ್ಯಾಗಾರದಲ್ಲಿ ಪಾಲ್ಗೊಲು ಆಸಕ್ತರಾದ 10 ನೆಯ ತರಗತಿಯ ವಿದ್ಯಾರ್ಥಿಗಳು ಹಾಗೂ ಹತ್ತನೆಯ ತರಗತಿ ವಿದ್ಯಾರ್ಥಿಗಳ ಹೆತ್ತವರು 9902369252 ಅಥವಾ 9743396842 ಸಂಪರ್ಕಿಸಬಹುದು ಎಂದರು.

Related posts

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya
error: Content is protected !!