September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

ಗುರುವಾಯನಕೆರೆ: ನೀಟ್, ಜೆ ಇ ಇ , ಸಿ ಇ ಟಿ ಸೇರಿ ವಿವಿಧ ಸ್ಪರ್ಧಾತ್ಮಕ ಹಾಗೂ ಬೋರ್ಡ್ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನನ್ಯ ಸ್ಥಾನ ಗಳಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಪಯುಕ್ತವಾಗುವ ಕಾರ್ಯಾಗಾರ ನಡೆಯಲಿದೆ ಎಂದು ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದರು.

ಹೆಸರಾಂತ ಶಿಕ್ಷಣ ತಜ್ಞರು ಹಾಗೂ ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ಗಂಟೆ 9 ಕ್ಕೆ ದಾಖಲಾತಿ, 9.30 ಕ್ಕೆ ಉಪಾಹಾರ ,10 ಗಂಟೆಗೆ ಉದ್ಘಾಟನೆ ನಡೆದು, ಕಾರ್ಯಾಗಾರ ಸಂಪನ್ನಗೊಳ್ಳಲಿದೆ.

ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕಕ್ಕಿಂಜೆ, ಬಿಸಿರೋಡ್, ವೇಣೂರು ಹಾಗೂ ಉಪ್ಪಿನಂಗಡಿ ಯಿಂದ ಕಾರ್ಯಾಗಾರಕ್ಕೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಉಚಿತ ಬಸ್ ಸಂಚಾರದ ವ್ಯವಸ್ಥೆ ಇದೆ.

ಕಾರ್ಯಾಗಾರದಲ್ಲಿ ಪಾಲ್ಗೊಲು ಆಸಕ್ತರಾದ 10 ನೆಯ ತರಗತಿಯ ವಿದ್ಯಾರ್ಥಿಗಳು ಹಾಗೂ ಹತ್ತನೆಯ ತರಗತಿ ವಿದ್ಯಾರ್ಥಿಗಳ ಹೆತ್ತವರು 9902369252 ಅಥವಾ 9743396842 ಸಂಪರ್ಕಿಸಬಹುದು ಎಂದರು.

Related posts

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya
error: Content is protected !!