24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿ

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಫೆ.10ರಿಂದ ಆರಂಭಗೊಂಡಿದ್ದು, ಬೆಳ್ತಂಗಡಿ ತಾಲೂಕು ಆಡಳಿತಾಧಿಕಾರಿಗಳು ಬೆಳ್ತಂಗಡಿ ಆಡಳಿತ ಸೌಧದ ಎದರು ಧರಣಿ ನಡೆಸುತ್ತಿದ್ದು, ತಾಲೂಕಿನಲ್ಲಿ ಕಂದಾಯ ಇಲಾಖೆಯ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.

ಕಳೆದ ಸಪ್ಟಂಬರ್ ತಿಂಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ರಾಜ್ಯ ವ್ಯಾಪ್ತಿ ಮುಸ್ಕರ ನಡೆಸಿದ್ದು, ಆ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಅದರಂತೆ ಮುಷ್ಕರವನ್ನು ಹಿಂಪಡೆಯಲಾಗಿತ್ತು. ನಂತರ ಸರಕಾರ ನೌಕರರ ಬೇಡಿಕೆಗಳ ಬಗ್ಗೆ ಯಾವುದೇ ತೃಪ್ತಿದಾಯಕ ಕ್ರಮಗಳನ್ನು ಕೈಗೊಂಡಿಲ್ಲ, ಬೇಡಿಕೆಗಳನ್ನು ಈಡೇರಿಸಿಲ್ಲ, ಬದಲಾಗಿ ಮುಷ್ಕರ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ನೀಡಿದೆ. ಇದರಿಂದಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ ಕರೆಯಂತೆ ಸರಕಾರದ ಮುಂದೆ 23 ಬೇಡಿಕೆಗಳನ್ನು ಮುಂದುವರಿಸಿ, ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ನಡೆಸುತ್ತಿದ್ದಾರೆ.


ಬೆಳ್ತಂಗಡಿ ಆಡಳಿತ ಸೌಧದ ಎದರು ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್, ಪರಮೇಶ್ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya
error: Content is protected !!