37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ.

ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿ ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ಸಂಪೂತ್ಯವಾಗಿ ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಂಡು ಬಂದಿತ್ತು. ರಾತ್ರಿ ಈ ಆನೆ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಡಾನೆ ಯಾವರೀತಿ ಸಾವನ್ನು ಅಪ್ಪಿದೆ ಎಂಬುದು ಪೋಸ್ಟ್ ಮಾರ್ಟಂ ಬಳಿಕವೇ ತಿಳಿದು ಬರಬೇಕಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದು ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಕಾಡಾನೆ ಜನವಸತಿ ಪ್ರದೇಶದ ಸಮೀಪ ಸಾವನ್ನಪ್ಪಿದ್ದು ಅರಣ್ಯ ಇಲಾಖೆಯವರು ಎಲ್ಲ ರೀತಿಯ ಪರಿಶೀಲನೆಗಳನ್ನು ನಡೆಸಿದ ಬಳಿಕವಷ್ಟೇ ಆನೆಯ ಮೃತದೇಹದ ದಹನ ಕಾರ್ಯ ಮಾಡಲಿದ್ದಾರೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya
error: Content is protected !!