29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ.

ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿ ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ಸಂಪೂತ್ಯವಾಗಿ ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಂಡು ಬಂದಿತ್ತು. ರಾತ್ರಿ ಈ ಆನೆ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಡಾನೆ ಯಾವರೀತಿ ಸಾವನ್ನು ಅಪ್ಪಿದೆ ಎಂಬುದು ಪೋಸ್ಟ್ ಮಾರ್ಟಂ ಬಳಿಕವೇ ತಿಳಿದು ಬರಬೇಕಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದು ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಕಾಡಾನೆ ಜನವಸತಿ ಪ್ರದೇಶದ ಸಮೀಪ ಸಾವನ್ನಪ್ಪಿದ್ದು ಅರಣ್ಯ ಇಲಾಖೆಯವರು ಎಲ್ಲ ರೀತಿಯ ಪರಿಶೀಲನೆಗಳನ್ನು ನಡೆಸಿದ ಬಳಿಕವಷ್ಟೇ ಆನೆಯ ಮೃತದೇಹದ ದಹನ ಕಾರ್ಯ ಮಾಡಲಿದ್ದಾರೆ.

Related posts

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!