September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ.

ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿ ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ಸಂಪೂತ್ಯವಾಗಿ ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಂಡು ಬಂದಿತ್ತು. ರಾತ್ರಿ ಈ ಆನೆ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಡಾನೆ ಯಾವರೀತಿ ಸಾವನ್ನು ಅಪ್ಪಿದೆ ಎಂಬುದು ಪೋಸ್ಟ್ ಮಾರ್ಟಂ ಬಳಿಕವೇ ತಿಳಿದು ಬರಬೇಕಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದು ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಕಾಡಾನೆ ಜನವಸತಿ ಪ್ರದೇಶದ ಸಮೀಪ ಸಾವನ್ನಪ್ಪಿದ್ದು ಅರಣ್ಯ ಇಲಾಖೆಯವರು ಎಲ್ಲ ರೀತಿಯ ಪರಿಶೀಲನೆಗಳನ್ನು ನಡೆಸಿದ ಬಳಿಕವಷ್ಟೇ ಆನೆಯ ಮೃತದೇಹದ ದಹನ ಕಾರ್ಯ ಮಾಡಲಿದ್ದಾರೆ.

Related posts

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಅರುಣ್ ಕಿಲ್ಲೂರು ಅವರ ವಿವಿಧ ಹೂಡಿಕೆ ಕುರಿತ ‘Zero to Crore’ ಕೃತಿ ಬಿಡುಗಡೆ

Suddi Udaya

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೃಹ ಜ್ಯೋತಿ ಯೋಜನೆ: ಮನೆ ಮನೆಗೆ ತೆರಳಿ ಅರ್ಜಿ ಸ್ವೀಕಾರ – ಗೊಂದಲ ಬೇಡ, ಅರ್ಹರನ್ನು ಕೈಬಿಡುವುದಿಲ್ಲ: ಪದ್ಮನಾಭ ಸಾಲಿಯನ್

Suddi Udaya
error: Content is protected !!