23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಹಿನ್ನಲೆ ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದರು.

25 ರಿಂದ 30 ವರ್ಷದ ಹೆಣ್ಣು ಆನೆ ಆಗಿದ್ದು , ಕಳೆದ ಎರಡು ತಿಂಗಳಿಂದ ಸರಿಯಾದ ಆಹಾರ ಸೇವಿಸುತ್ತಿರಲ್ಲಿಲ್ಲ ಎನ್ನಲಾಗಿದೆ ‌. ಆನೆಯ ದೇಹದ ಹೊರಗಡೆ ಯಾವುದೇ ಗಾಯವಿಲ್ಲ ದೇಹದ ಒಳಗೆ ಬಹು ಅಂಗಾಂಗ ವೈಫಲ್ಯ ಇರುವುದು ಕಂಡು ಬಂದಿದೆ ಎಂದು ಡಿಎಫ್ಓ ಮಾಹಿತಿ ನೀಡಿದರು.

ಭದ್ರತಾ ದೃಷ್ಟಿಯಿಂದ ಆನೆಯ ಎರಡು ದಂತವನ್ನು ತೆಗೆದು ಬೆಳ್ತಂಗಡಿ ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ‌.

ಬೆಳ್ತಂಗಡಿ ಡಾ. ರವಿ ಕುಮಾರ್.ಎಮ್, ಚಾರ್ಮಾಡಿ ಡಾ.ಯತೀಶ್ ಕುಮಾರ್.ಎಮ್.ಎಸ್ ಮರಣೋತ್ತರ ಪರೀಕ್ಷೆ ನಡೆಸಿದರು.

ಡಿಎಫ್ಓ ಅಂಥೋಣಿ ಮರಿಯಪ್ಪ, ಎಸಿಎಫ್ ಕ್ಷೀಫರ್ಡ್ ಲೋಬೋ, ಆರ್.ಎಫ್.ಓ ಟಿ.ಎನ್.ತ್ಯಾಗರಾಜ್, ಚಾರ್ಮಾಡಿ ಡಿ.ವೈ.ಆರ್.ಎಫ್‌.ಓ ನಾಗೇಶ್.ಪಿ.ಜಿ. ಬೆಳ್ತಂಗಡಿ ಡಿ.ವೈಆರ್.ಎಫ್.ಓ ರವಿಚಂದ್ರ.ಕೆ, ಗಸ್ತು ಅರಣ್ಯ ಪಾಲಕ ರವಿ,ಪರಶುರಾಮ, ಅರಣ್ಯ ವೀಕ್ಷಕರಾದ ಗೋಪಾಲ, ಕಿಟ್ಟಣ್ಣ, ಮನೋಹರ್,ಅನಿಲ್. , ಸ್ಥಳೀಯರಾದ ಸ್ನೇಕ್ ಅನಿಲ್, ಮುಂಡಾಜೆ ಸಚಿನ್ ಭೀಡೆ,ಜನಾರ್ದನ, ಕೃಷ್ಣಪ್ಪ ಭಾಗಿಯಾಗಿದ್ದರು‌.

ಆನೆಯನ್ನು ಸ್ಥಳದಲ್ಲಿಯೇ ಹಿಟಾಚಿ ಮೂಲಕ ದಫನ‌ ಮಾಡಲಾಯಿತು.

Related posts

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya
error: Content is protected !!