25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಹಿನ್ನಲೆ ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದರು.

25 ರಿಂದ 30 ವರ್ಷದ ಹೆಣ್ಣು ಆನೆ ಆಗಿದ್ದು , ಕಳೆದ ಎರಡು ತಿಂಗಳಿಂದ ಸರಿಯಾದ ಆಹಾರ ಸೇವಿಸುತ್ತಿರಲ್ಲಿಲ್ಲ ಎನ್ನಲಾಗಿದೆ ‌. ಆನೆಯ ದೇಹದ ಹೊರಗಡೆ ಯಾವುದೇ ಗಾಯವಿಲ್ಲ ದೇಹದ ಒಳಗೆ ಬಹು ಅಂಗಾಂಗ ವೈಫಲ್ಯ ಇರುವುದು ಕಂಡು ಬಂದಿದೆ ಎಂದು ಡಿಎಫ್ಓ ಮಾಹಿತಿ ನೀಡಿದರು.

ಭದ್ರತಾ ದೃಷ್ಟಿಯಿಂದ ಆನೆಯ ಎರಡು ದಂತವನ್ನು ತೆಗೆದು ಬೆಳ್ತಂಗಡಿ ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ‌.

ಬೆಳ್ತಂಗಡಿ ಡಾ. ರವಿ ಕುಮಾರ್.ಎಮ್, ಚಾರ್ಮಾಡಿ ಡಾ.ಯತೀಶ್ ಕುಮಾರ್.ಎಮ್.ಎಸ್ ಮರಣೋತ್ತರ ಪರೀಕ್ಷೆ ನಡೆಸಿದರು.

ಡಿಎಫ್ಓ ಅಂಥೋಣಿ ಮರಿಯಪ್ಪ, ಎಸಿಎಫ್ ಕ್ಷೀಫರ್ಡ್ ಲೋಬೋ, ಆರ್.ಎಫ್.ಓ ಟಿ.ಎನ್.ತ್ಯಾಗರಾಜ್, ಚಾರ್ಮಾಡಿ ಡಿ.ವೈ.ಆರ್.ಎಫ್‌.ಓ ನಾಗೇಶ್.ಪಿ.ಜಿ. ಬೆಳ್ತಂಗಡಿ ಡಿ.ವೈಆರ್.ಎಫ್.ಓ ರವಿಚಂದ್ರ.ಕೆ, ಗಸ್ತು ಅರಣ್ಯ ಪಾಲಕ ರವಿ,ಪರಶುರಾಮ, ಅರಣ್ಯ ವೀಕ್ಷಕರಾದ ಗೋಪಾಲ, ಕಿಟ್ಟಣ್ಣ, ಮನೋಹರ್,ಅನಿಲ್. , ಸ್ಥಳೀಯರಾದ ಸ್ನೇಕ್ ಅನಿಲ್, ಮುಂಡಾಜೆ ಸಚಿನ್ ಭೀಡೆ,ಜನಾರ್ದನ, ಕೃಷ್ಣಪ್ಪ ಭಾಗಿಯಾಗಿದ್ದರು‌.

ಆನೆಯನ್ನು ಸ್ಥಳದಲ್ಲಿಯೇ ಹಿಟಾಚಿ ಮೂಲಕ ದಫನ‌ ಮಾಡಲಾಯಿತು.

Related posts

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya
error: Content is protected !!