April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

ಬಳಂಜ: ನವ ವಿವಾಹಿತ, ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ (35 ವರ್ಷ) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ‌ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ ಪೂಜಾರಿಯವರ ಪುತ್ರ ಕಿರಣ್ ಅವರು ಕಳೆದ 12 ವರ್ಷಗಳಿಂದ ಮೈಸೂರಿನ ಖಾಸಾಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಮೂರೂವರೆ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಮೃದು ಹಾಗೂ ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿರುವ ಇವರು, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಯುವಶಕ್ತಿ ಫ್ರೆಂಡ್ಸ್ ಇದರ ಸದಸ್ಯರಾಗಿದ್ದರು.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಈ ಸಂಬಂಧ ಮೈಸೂರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮೃತರು ತಂದೆ ಕರಿಯ ಪೂಜಾರಿ, ತಾಯಿ ಭಾರತಿ, ಪತ್ನಿ ಅನುಪ್ರಿಯ, ಸಹೋದರ ರಂಜಿತ್ ಪೂಜಾರಿ, ಸಹೋದರಿ ಗುಣವತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!