September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು, ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕ ಹರೀಶ್ ಪೂಂಜರಿಗೆ ಫೆ.14ರಂದು ಸಲ್ಲಿಸಿ ದರು.

ಈ ಹಿಂದೆ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಅದರಂತೆ ಮುಷ್ಕರವನ್ನು ಹಿಂಪಡೆಯಲಾಗಿತ್ತು. ನಂತರ ಸರಕಾರ ನೌಕರರ ಬೇಡಿಕೆಗಳ ಬಗ್ಗೆ ಯಾವುದೇ ತೃಪ್ತಿದಾಯಕ ಕ್ರಮಗಳನ್ನು ಕೈಗೊಂಡಿಲ್ಲ, ಬೇಡಿಕೆಗಳನ್ನು ಈಡೇರಿಸಿಲ್ಲ, ಬದಲಾಗಿ ಮುಷ್ಕರ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ನೀಡಿದೆ. ಇದರಿಂದಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ ಕರೆಯಂತೆ ಸರಕಾರದ ಮುಂದೆ 23 ಬೇಡಿಕೆಗಳನ್ನು ಮುಂದುವರಿಸಿ, ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ನಡೆಸುತ್ತಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್, ಪರಮೇಶ್ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರ್, ಹಾಗೂ ಪೊಲೀಸ್ ಠಾಣೆಗೆ ಮನವಿ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭಾರೀ ಮಳೆ; ಮದ್ದಡ್ಕ ಹೋಟೆಲ್ ಗೆ ನುಗ್ಗಿದ ಮಳೆ ನೀರು

Suddi Udaya
error: Content is protected !!