23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

ಹೊಸಂಗಡಿ : ಎಕ್ಸಲೆಂಟ್ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಶಿಕ್ಷಣಾತ್ಮಕ ಭೇಟಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಪಿ ಡಿ ಒ ಗಣೇಶ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿನ ಕಾರ್ಯ, ಕರ್ತವ್ಯ ಮತ್ತು ಹೊಣೆಗಾರಿಕೆಯ ಕುರಿತು ವಿವರವಾಗಿ ತಿಳಿಸಿದರು. ಗ್ರಾಮೀಣ ಅಭಿವೃದ್ಧಿಯ ಮೂಲಸೌಕರ್ಯ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳು ಬಗ್ಗೆ ವಿದ್ಯಾರ್ಥಿಗಳು ಸಮಗ್ರ ಜ್ಞಾನ ಪಡೆದರು. ವಿದ್ಯಾರ್ಥಿಗಳು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಕುತೂಹಲಕ್ಕೆ ಉತ್ತರಗಳನ್ನು ಪಡೆದರು ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ತಮ್ಮ ಕೈಯಿಂದ ತಯಾರಿಸಿದ ಹೂಗುಚ್ಛ ನೀಡಿ ಗೌರವಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ಕಾಂತಪ್ಪರವರು ವಿದ್ಯಾರ್ಥಿಗಳಿಗೆ ಚುನಾವಣೆ ಪದ್ಧತಿಯ ಮಾಹಿತಿ ನೀಡಿದರು. ಸ್ಕೌಟ್ ಮಾಸ್ಟರ್ ನವೀನ್, ಭಾಸ್ಕರ್ ನೆಲ್ಯಾಡಿ ಉಪಸ್ಥಿತರಿದ್ದರು. ಕೃಷಿ ಕ್ಷೇತ್ರದಲ್ಲಿ ಸರ್ಕಾರದ ಸೌಲಭ್ಯಗಳ ಮಾಹಿತಿ, ಈ ಶಿಕ್ಷಣಾತ್ಮಕ ಭೇಟಿ ವಿದ್ಯಾರ್ಥಿಗಳಲ್ಲಿ ನಾಗರಿಕ ಜಾಗೃತಿ ಮತ್ತು ಜವಾಬ್ದಾರಿತ್ವ ಭಾವನೆ ಬೆಳೆಸಲು ಮಹತ್ವದ ಪಾತ್ರ ವಹಿಸಿತು.

Related posts

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!