24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

ಹೊಸಂಗಡಿ : ಎಕ್ಸಲೆಂಟ್ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಶಿಕ್ಷಣಾತ್ಮಕ ಭೇಟಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಪಿ ಡಿ ಒ ಗಣೇಶ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿನ ಕಾರ್ಯ, ಕರ್ತವ್ಯ ಮತ್ತು ಹೊಣೆಗಾರಿಕೆಯ ಕುರಿತು ವಿವರವಾಗಿ ತಿಳಿಸಿದರು. ಗ್ರಾಮೀಣ ಅಭಿವೃದ್ಧಿಯ ಮೂಲಸೌಕರ್ಯ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳು ಬಗ್ಗೆ ವಿದ್ಯಾರ್ಥಿಗಳು ಸಮಗ್ರ ಜ್ಞಾನ ಪಡೆದರು. ವಿದ್ಯಾರ್ಥಿಗಳು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಕುತೂಹಲಕ್ಕೆ ಉತ್ತರಗಳನ್ನು ಪಡೆದರು ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ತಮ್ಮ ಕೈಯಿಂದ ತಯಾರಿಸಿದ ಹೂಗುಚ್ಛ ನೀಡಿ ಗೌರವಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ಕಾಂತಪ್ಪರವರು ವಿದ್ಯಾರ್ಥಿಗಳಿಗೆ ಚುನಾವಣೆ ಪದ್ಧತಿಯ ಮಾಹಿತಿ ನೀಡಿದರು. ಸ್ಕೌಟ್ ಮಾಸ್ಟರ್ ನವೀನ್, ಭಾಸ್ಕರ್ ನೆಲ್ಯಾಡಿ ಉಪಸ್ಥಿತರಿದ್ದರು. ಕೃಷಿ ಕ್ಷೇತ್ರದಲ್ಲಿ ಸರ್ಕಾರದ ಸೌಲಭ್ಯಗಳ ಮಾಹಿತಿ, ಈ ಶಿಕ್ಷಣಾತ್ಮಕ ಭೇಟಿ ವಿದ್ಯಾರ್ಥಿಗಳಲ್ಲಿ ನಾಗರಿಕ ಜಾಗೃತಿ ಮತ್ತು ಜವಾಬ್ದಾರಿತ್ವ ಭಾವನೆ ಬೆಳೆಸಲು ಮಹತ್ವದ ಪಾತ್ರ ವಹಿಸಿತು.

Related posts

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!