September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

ಹೊಸಂಗಡಿ : ಎಕ್ಸಲೆಂಟ್ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಶಿಕ್ಷಣಾತ್ಮಕ ಭೇಟಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಪಿ ಡಿ ಒ ಗಣೇಶ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿನ ಕಾರ್ಯ, ಕರ್ತವ್ಯ ಮತ್ತು ಹೊಣೆಗಾರಿಕೆಯ ಕುರಿತು ವಿವರವಾಗಿ ತಿಳಿಸಿದರು. ಗ್ರಾಮೀಣ ಅಭಿವೃದ್ಧಿಯ ಮೂಲಸೌಕರ್ಯ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳು ಬಗ್ಗೆ ವಿದ್ಯಾರ್ಥಿಗಳು ಸಮಗ್ರ ಜ್ಞಾನ ಪಡೆದರು. ವಿದ್ಯಾರ್ಥಿಗಳು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಕುತೂಹಲಕ್ಕೆ ಉತ್ತರಗಳನ್ನು ಪಡೆದರು ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ತಮ್ಮ ಕೈಯಿಂದ ತಯಾರಿಸಿದ ಹೂಗುಚ್ಛ ನೀಡಿ ಗೌರವಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ಕಾಂತಪ್ಪರವರು ವಿದ್ಯಾರ್ಥಿಗಳಿಗೆ ಚುನಾವಣೆ ಪದ್ಧತಿಯ ಮಾಹಿತಿ ನೀಡಿದರು. ಸ್ಕೌಟ್ ಮಾಸ್ಟರ್ ನವೀನ್, ಭಾಸ್ಕರ್ ನೆಲ್ಯಾಡಿ ಉಪಸ್ಥಿತರಿದ್ದರು. ಕೃಷಿ ಕ್ಷೇತ್ರದಲ್ಲಿ ಸರ್ಕಾರದ ಸೌಲಭ್ಯಗಳ ಮಾಹಿತಿ, ಈ ಶಿಕ್ಷಣಾತ್ಮಕ ಭೇಟಿ ವಿದ್ಯಾರ್ಥಿಗಳಲ್ಲಿ ನಾಗರಿಕ ಜಾಗೃತಿ ಮತ್ತು ಜವಾಬ್ದಾರಿತ್ವ ಭಾವನೆ ಬೆಳೆಸಲು ಮಹತ್ವದ ಪಾತ್ರ ವಹಿಸಿತು.

Related posts

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಹಾಗೂ 9 ವಲಯಗಳ ಆಶ್ರಯದಲ್ಲಿ ಆಟಿದ ಕಮ್ಮೆನ ಮತ್ತು ಆಟೋಟ ಸ್ಪರ್ಧೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!