ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.
ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು ಈ ಮೆಟ್ರಿಕ್ ಮೇಳದ ಪ್ರಮುಖವಾದ ಉದ್ದೇಶವಾಗಿದೆ ಎಂದು ಮಾರ್ಗದರ್ಶಿ ಶಿಕ್ಷಕ ವಿಕಾಸ್ ರಾವ್ ರವರು ತಿಳಿಸಿದರು.
ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಿಕ್ಷಕ ವೃಂದ , ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.