30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ.


ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.


ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವು ಗೊಳಿಸುವ ಕಾರ್ಯ ಮಾಡಿದ್ದು ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕಾಮಗಾರಿ ನಡೆಸುತ್ತಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳು ಆಗಾಗ ಓಡಾಟ ನಡೆಸುತ್ತಿದ್ದು ಹಿಂದೆ ಇಲ್ಲಿಯೇ ವಾಹನಗಳ ಮೇಲೆ ದಾಳಿ ನಡೆಸಿತ್ತು. ಧರ್ಮಸ್ಥಳ ಗ್ರಾಮದ ನೇರ್ತನೆ ಬೊಳಿಯಾರು, ಮುಳಿಕಾರು ಪರಿಸರದಲ್ಲಿ ಆಗಾಗ ವ್ಯಾಪಕ ಕೃಷಿ ಹಾನಿಯುಂಟುಮಾಡುತ್ತಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya
error: Content is protected !!