26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ.


ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.


ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವು ಗೊಳಿಸುವ ಕಾರ್ಯ ಮಾಡಿದ್ದು ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕಾಮಗಾರಿ ನಡೆಸುತ್ತಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳು ಆಗಾಗ ಓಡಾಟ ನಡೆಸುತ್ತಿದ್ದು ಹಿಂದೆ ಇಲ್ಲಿಯೇ ವಾಹನಗಳ ಮೇಲೆ ದಾಳಿ ನಡೆಸಿತ್ತು. ಧರ್ಮಸ್ಥಳ ಗ್ರಾಮದ ನೇರ್ತನೆ ಬೊಳಿಯಾರು, ಮುಳಿಕಾರು ಪರಿಸರದಲ್ಲಿ ಆಗಾಗ ವ್ಯಾಪಕ ಕೃಷಿ ಹಾನಿಯುಂಟುಮಾಡುತ್ತಿದೆ.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya
error: Content is protected !!