July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ಬೊಳಿಯಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಎಳೆದ ಮರವೊಂದು ವಿದ್ಯುತ್ ಲೈನಿನ ಮೇಲೆ ಬಿದ್ದ ಘಟನೆ ಫೆ.15ರಂದು ಬೆಳಗ್ಗಿನ ಜಾವ ಸಂಭವಿಸಿದೆ.


ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.


ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮರವನ್ನು ತೆರವು ಗೊಳಿಸುವ ಕಾರ್ಯ ಮಾಡಿದ್ದು ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸುವ ಕಾಮಗಾರಿ ನಡೆಸುತ್ತಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳು ಆಗಾಗ ಓಡಾಟ ನಡೆಸುತ್ತಿದ್ದು ಹಿಂದೆ ಇಲ್ಲಿಯೇ ವಾಹನಗಳ ಮೇಲೆ ದಾಳಿ ನಡೆಸಿತ್ತು. ಧರ್ಮಸ್ಥಳ ಗ್ರಾಮದ ನೇರ್ತನೆ ಬೊಳಿಯಾರು, ಮುಳಿಕಾರು ಪರಿಸರದಲ್ಲಿ ಆಗಾಗ ವ್ಯಾಪಕ ಕೃಷಿ ಹಾನಿಯುಂಟುಮಾಡುತ್ತಿದೆ.

Related posts

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya
error: Content is protected !!