April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿ ಇತ್ತೀಚೆಗೆ ದಿವಂಗತರಾದ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದ ಕಾಶ್ಮೀರಿ ಮೆನೇಜಸ್‌ ಅವರ ನಿಧನದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಇಂದು (ಫೆ. 15) ಶ್ರದ್ಧಾಂಜಲಿ ಸಭೆ ನಡೆಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ಜೈನ್ ಅವರು, ಮೆನೇಜಸ್‌ ಅವರು ಸಂಸ್ಥೆಯಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.

ಶಿಕ್ಷಕ ಯುವರಾಜ ಅವರು ಶ್ರೀಯುತ ರಿಗೆ ನುಡಿ ನಮನವನ್ನು ಸಲ್ಲಿಸುತ್ತಾ , ಶಿಕ್ಷಣ ಕಾಶಿ ಎನಿಸಿದ ಉಜಿರೆಯಲ್ಲಿ ಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಆರಂಭವಾದ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿನಿಲಯದ ಪ್ರಧಾನ ಪಾಲಕರಾಗಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೃಷಿ, ಹೈನುಗಾರಿಕೆ, ವ್ಯಕ್ತಿತ್ವ ವಿಕಸನ ತರಬೇತಿಗಳನ್ನು ನೀಡುವಲ್ಲಿ ಕಾಶ್ಮೀರಿ ಮೆನೇಜಸ್‌ ಸಫಲರಾದವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಭಾಗ ಹಾಗೂ ಶ್ರೀ ಧ. ಮಂ. ರೆಸಿಡೆನ್ಶಿಯಲ್ ಪಿಯು ಕಾಲೇಜಿನ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು” ಎಂದರು.

ಕಾಶ್ಮೀರಿ ಮೆನೇಜಸ್‌ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು..

ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಕಚೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ವೃಂದದವರು ಶ್ರೀಯತರ ಆತ್ಮ ಸದ್ಗತಿಗಾಗಿ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya
error: Content is protected !!