July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

ಬೆಳ್ತಂಗಡಿ : ಇಲ್ಲಿಯ ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿದ್ಯಾರ್ಥಿಗಳಲ್ಲಿ ಗಣಿತದ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮವನ್ನು ಫೆ.15 ರಂದು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಇದರ ಸಂಪನ್ಮೂಲ ವ್ಯಕ್ತಿಗಳಾದ ಮೋಹನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ಗಿಡಕ್ಕೆ ನೀರನ್ನ ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ಚರಣ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ವಾರಿಜಾ, ಶಾಲಾ ಮುಖ್ಯ ಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯರು, ಎಸ್.ಡಿ.ಎಮ್.ಸಿ ಸದಸ್ಯರು, ಶಾಲಾ ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು. ಗಣಿತ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಶಿಕ್ಷಕಿ ವಿದ್ಯಾಶೆಣೈರವರು ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು.

ವಿದ್ಯಾರ್ಥಿಗಳು ಮನೆಯಲ್ಲೇ ಬೆಳೆದ ನಾನಾ ಬಗೆಯ ತರಕಾರಿಗಳು, ಹಣ್ಣುಗಳು ಹಾಗೂ ವಿವಿಧ ಬಗೆಯ ಸ್ಟೇಷನರಿ ವಸ್ತುಗಳನ್ನ ಮಾರಾಟಕ್ಕೆ ಅಣಿಗೊಳಿಸಿದ್ದರು. ಇದರ ಜೊತೆಯಲ್ಲಿ ತಾವೇ ತಯಾರಿಸಿದ ಬಗೆಬಗೆಯ ತಿಂಡಿ ತಿನಿಸು, ಚುರುಮುರಿ, ಪಾನೀಯಗಳನ್ನು ಮಾರಾಟ ಮಾಡಿದರು. ಶಾಲಾ ಮಕ್ಕಳ ಜೊತೆಯಲ್ಲಿ ಪೋಷಕರು ಸಹ ಈ ವೇಳೆಯಲ್ಲಿ ಪಾಲ್ಗೊಂಡು ಮಕ್ಕಳ ವ್ಯವಹಾರ ಜ್ಞಾನ ಹೆಚ್ಚಿಸಲು ನೆರವನ್ನ ನೀಡಿದರು. ಚಿಕ್ಕ ಚಿಕ್ಕ ಮಕ್ಕಳು ವಸ್ತುಗಳನ್ನು ಖರೀದಿಸಿ ಸಂಭ್ರಮಿಸಿದರು. ಶಿಕ್ಷಕಿ ಶ್ರೀಮತಿ ಶುಭ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಂದಿಸಿದರು.

Related posts

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya
error: Content is protected !!